Monday, May 23, 2011

ರೈಲಿನಲ್ಲಿ ನಡೆದ ಕೆಲವು ಪ್ರಸಂಗಗಳು!!!!

BMTC ಬಸ್ ಇಳಿದು ಆ ಬಿಸಿಲ ಧಗೆಯಲಿ ಎರಡೂ  ಕೈಯಲ್ಲಿ ಲಗೇಜು ಹಿಡಿದು,fly over ಏರಿ  ಮತ್ತೆ ಕೆಳಗಿಳಿದು ಅಂಡರ್ ಪಾಸ್ ಎಂಬ ಸುರಂಗ ದಾಟಿ ,ಕೌಂಟರ್ ಮುಂದೆ ಲಗೇಜು ಇಟ್ಟು ಟಿಕೆಟ್ ಕೊಡಿ ಎಂದರೆ ಸರ್ ಚೇಂಜ್ ಇಲ್ಲ ದಯವಿಟ್ಟು ನೀವೇ ಇದ್ದರೆ ಕೊಟ್ಟು ಬಿಡಿ ಎಂದು ಆಕೆ ಹೇಳಿದಾಗ,'ಇದ್ದಿದ್ರೆ ಕೊಡುತ್ತಿದ್ದೆ,ನನ್ನ ಹತ್ರಾನು ಇಲ್ಲ ಎಂದರೆ ನೀವೇ ತಗೊಂಡು ಬರಬೇಕು ಎಂದಳು...
ಸರಿ ಬಿಡಮ್ಮ ತಾಯಿ ಎಂದು ಮನಸಿನಲ್ಲೇ ಹೇಳಿಕೊಳ್ಳುತ್ತಾ,ಹೇಗೂ  ಊಟ ಮಾಡಿಲ್ಲ,ಹೋಟೆಲಿಗೆ ಹೋದರೆ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಿಂದ,ಊಟ ಮಾಡಿ ಆಕೆಯ ಇಚ್ಚೆಯಂತೆ ಚೇಂಜ್ ಕೊಟ್ಟು ಟಿಕೆಟ್ ತಗೊಂಡು ಮತ್ತೆ ಎರಡು ಕೈಯಲ್ಲಿ ಲಗೇಜು ಹಿಡಿದು ಅವಸರ ಅವಸರವಾಗಿ platform ಕಡೆಗೆ ಹೋಗುತ್ತಿದ್ದರೆ,ಬಿಸಿಲ ಧಗೆಗೆ ಬೆವರು ತೊಟ್ಟಿಕ್ಕುತ್ತಿತ್ತು.
*************************************
ಮುಕ್ಕಾಲು ಘಂಟೆ ಮುಂಚೆಯೇ ಬಂದು ರೈಲು ಹತ್ತಿ ಸೀಟಿಗಾಗಿ ಅರಸುತ್ತ ರೈಲಿನೊಳಗೆ ಸಾಗುತ್ತ ಹೋದೆ.ಕೆಲವು ಸೀಟು ಖಾಲಿ ಇದ್ದರು,ಆಗಲೇ ಅದನ್ನು ಆಕ್ರಮಿಸಿಕೊಂಡಿದ್ದವರ ಮುಖ ಚರ್ಯೆ ಇಂದ  ಕೂರಲು  ಮನಸ್ಸಾಗಲಿಲ್ಲ,ಹಾಗೆ ಮುಂದೆ ಸಾಗುತ್ತ ಹೋದಂತೆ ಎದುರು ಬದುರು ಸೀಟಿನಲ್ಲಿ ಒಬ್ಬೊಬ್ಬರು ಕೂತಿದ್ದರು,ಒಬ್ಬ ಸುಮಾರು ೧೫ ಪ್ರಾಯದ ಹುಡುಗ,ಇನ್ನೊಬ್ಬ ಬಹುಷಃ ೨೦ ಇರಬಹುದು...
***************************************
ಹಾಗೆ formality ಗೆ ಯಾರಾದ್ರು ಬರ್ತಾರ? ಎಂದು ಕೇಳಿದ ಕೂಡಲೇ,ಆ ಚಿಕ್ಕ ಹುಡುಗ "ಹೌದು ಅಣ್ಣ  ,ಇಬ್ಬರು  ಬರ್ತಾರೆ"ಅಂದ,ಇನ್ನೊಬ್ಬ"ಏ,ಇಲ್ಲ ಕೂರಿ ಸರ್ "ಅಂತ ಹೇಳಿ ಸ್ವಲ್ಪ ಸರಿದ..
"ಅಲ್ಲಪ್ಪ ,ಯಾರೋ ಬರ್ತಾರೆ ಅಂದೆ?"
"ಏನ್ ಮಾಡೋದು ಅಣ್ಣ ,ಆರಾಮಾಗಿ ಕೂರಬೇಕಲ್ಲ ಅದಕ್ಕೆ"
"ಮುಂಚೆ ಬಂದು ಕೂತಿದ್ಯ,ಅದಕ್ಕೆ ಹೀಗೆ ಹೇಳಿದೆ,ಬೇರೆ ಯಾರಾದ್ರೂ ಈ ಥರಾ ಕೂತು,ನಿನಗೆ ಇದೆ ಥರಾ ಹೇಳಿದ್ರೆ?"
"ಹೀ ಹೀ ಹೀ"ಅಂತ  ನಕ್ಕ.
ಸರಿ ಅಂತ ಲಗೇಜು ಇಟ್ಟು,ಅಲ್ಲೇ ಕೂತರೆ ಬೆವರು  ಇಳಿಯುತ್ತಿದೆ..ಫ್ಯಾನ್ ಕೂಡ ಆನ್ ಇಲ್ಲ,ಇದೆ initial point ಆದ್ದರಿಬ್ದ ರೈಲು ಹೊರಡುವ ಅರ್ಧ ಘಂಟೆ ಮುಂಚೆ ಫ್ಯಾನ್ ಆನ್ ಮಾಡುತ್ತಾರೆ.
ಪ್ರಯಾಣ ಮಾಡುವಾಗ  ಯಾವುದಾದರು ಪುಸ್ತಕ ಓದುವ ಅಭ್ಯಾಸ ನನಗೆ.ಅಭ್ಯಾಸ ಬಲದಂತೆ ಪುಸ್ತಕ ತೆಗೆದು,ಶೆಖೆ ಇದ್ದರಿಂದ ಸ್ವಲ್ಪ ಒತ್ತು ಗಾಳಿ ಬಿಸಿಕೊಳ್ಳೋಣ ಎಂದು,ಆ ಪುಸ್ತಕದಲ್ಲೇ ಬೀಸಿಕೊಳ್ಳುತ್ತಿದ್ದೆ.
"ಇನ್ನೊಂದು ೧೦ ನಿಮಿಷ ಅಣ್ಣ,ಇನ್ನೇನ್ ಫ್ಯಾನ್ ಆನ್ ಮಾಡುತ್ತಾರೆ" ಅಂತ ಅವನೇ ಶುರು ಮಾಡಿದ.
ಸರಿ ಮತ್ತಿನ್ನೇನು ಮಾಮೂಲು  ಚಾಳಿಯಂತೆ ಇಬ್ಬರೂ ಎಲ್ಲಿಗೆ ಹೋಗಬೇಕು,ಯಾವೂರು,ಅದೂ  ಇದು ಕುಶಲೋಪರಿ ಮಾತಾಡುತ್ತ ಕುಳಿತೆವು,ಎದುರುಗಿದ್ದವನು ಮಧ್ಯೆ ಏನೇನೋ ಪಸರಿಸುತ್ತಿದ್ದ.
ಸರಿ ಫ್ಯಾನ್ ಆನ್ ಆಯಿತು,ಪುಸ್ತಕ ತೊಡೆ ಮೇಲಿಟ್ಟು,ಸ್ವಲ್ಪ ನಿದ್ದೆ ಮಾಡೋಣ ಅನಿಸಿತು,ಹಾಗೆ ನಿದ್ರೆಗೆ ಜಾರಿದೆ.
*******************************************
ಸ್ವಲ್ಪ ಸಮಯದ ನಂತರ ಏನೇನೋ ಕಿವಿಗೆ ಬಿಳಲು ಶುರು ಆಯಿತು,ಯಾವುದೋ ಸಿನಿಮಾ ಗೀತೆ,
ಜೊತೆಗೆ ಯಾರೋ ಒಬ್ಬ "ಏ ಮುಚ್ಕಂಡು ಹೋಗು,ಕೊಡಲ್ಲ ಅಂತ ಹೇಳಿಲ್ವ?"
"ಏ ಅಣ್ಣಯ್ಯ,ಮಾಮು ಕೊಡೋ,ಯಾಕ್ ಹೀಗೆ ಸತಾಯಿಸುತ್ತಿದ್ದಿಯ?"ಅಂತ ಕೇಳಿಸಿತು.
ಎದ್ದು ನೋಡಿದರೆ,ನಾನು ಹತ್ತಿದಾಗ ತಕ್ಕ ಮಟ್ಟಿಗೆ ಖಾಲಿ ಇದ್ದ ಭೋಗಿ ತುಂಬಿದೆ,ಅಲ್ಲದೆ ಮೇಲಿನ ಸಂಭಾಷಣೆ ಪಕ್ಕದ ಸೀಟಿನಲ್ಲಿ ನಡೆಯುತ್ತಿದೆ,ಅಲ್ಲದೆ ರೈಲು ಯಶವಂತಪುರ ದಾಟಿದೆ.
ಅಲ್ಲಿ ಕೂತಿದ್ದ ಒಬ್ಬ ಯುವಕನಿಗೆ ಹಿಜಡಾ ದುಡ್ಡಿಗಾಗಿ ಪೀಡಿಸುತ್ತಿದ್ದ(ಳು)(ನು)(ತ್ತು).
ಅಲ್ಲಿಂದ ನಮ್ಮ ಸೀಟಿಗೆ ಬಂದು ಕೈ ಯೊಡ್ಡಿದಾಗ,ಅದರ ಜೊತೆ ಏನು ಮಾತು ಎಂದು ಸುಮ್ಮನೆ ಒಂದಷ್ಟು ಚಿಲ್ಲರೆ ಕೊಟ್ಟೆ.ರೈಲಿ ನಲ್ಲಿ  ಪ್ರತಿ ಸಾರಿ ಪ್ರಯಾಣ ಮಾಡುವಾಗ ಇದು ಮಾಮೂಲು,ಒಂಥರಾ ಮಾಮಂದಿರ ಮಾಮುಲಿದ್ದ ಹಾಗೆ.....

ಸರಿ ಅದು ಆಕಡೆ ಹೋದ ತಕ್ಷಣ ಪಕ್ಕದ  ಸೀಟಿನಲ್ಲಿ ಕೂತಿದ್ದ ಇಬ್ಬರು  ಚಿಕ್ಕ ಮಕ್ಕಳು ಸುಮಾರು ೭ ವರ್ಷ ಇರಬಹುದು.
ಅದರಲ್ಲೊಬ್ಬ  ತನ್ನ ಅಪ್ಪನಿಗೆ 'ಅಪ್ಪ ಇವರ್ಯಾರು ?"ಅಂದ,ಅವನ ಅಪ್ಪ ಮಾತು ಶುರು ಮಾಡುವ ಮುಂಚೆಯೇ ಇಷ್ಟೊತ್ತು ಅದರ ಜೊತೆ ವಾಗ್ವಾದ ಮಾಡುತ್ತಿದ್ದ ಇನ್ನೊಬ್ಬ"ಅಯ್ಯೋ ಬಿಡ್ರಪ್ಪ,ಯಾಕ್ ತಲೆ ಕೆಡಿಸ್ಕೊಳ್ತಿರ?"ಅಂದಾಗ
ಇನ್ನೊಬ್ಬ"ದೇವರು ಕಣಪ್ಪ"ಅಂದು ಬಿಟ್ಟ.
ಪಾಪ ಕಿಡಕಿ ಬದಿಯಲ್ಲಿ ಕೂತಿದ್ದ ಆ ಮಕ್ಕಳ  ತಾಯಿ ಕಕ್ಕಾ ಬಿಕ್ಕಿಯಾಗಿ ಬಿಟ್ಟರು.
ಇತ್ತ ಒಬ್ಬ ಮಗ ಅಪ್ಪನಿಗೆ ,ಇನ್ನೊಬ್ಬ ಮಗ ತಾಯಿಗೆ "ಹೌದೆನಪ್ಪ,ಹೌದೆನಮ್ಮ,ದೇವರು ಅಂದ್ರೆ ಇವರೇನಾ ಅಂತ ಪೀಡಿಸಲು ಶುರು ಮಾಡಿದರು.
ಅವರು ಕಾಟ ತಡೆಯಲಾರದೆ"ಇವರು ಗಂಡು ಅಲ್ಲ,ಹೆಣ್ಣು ಅಲ್ಲ"ಅಂದ.
ಅವರಿಬ್ಬರಲ್ಲಿ ದೊಡ್ಡವನು"ಗಂಡು ಅಂದ್ರೆ ಪುಲ್ಲಿಂಗ,ಹೆಣ್ಣು ಅಂದ್ರೆ ಸ್ತ್ರೀಲಿಂಗ,ಇವರು ಯಾವ ಲಿಂಗ"ಅಂದ....
ಶಾಲೆಯ  ಪರಿಭಾಷೆ ಇರಬಹುದು..
ಇರಲಿ.....
***********************************
ಹೀಗೆ ಅವರ ಮಾತು ನಡೆಯುತ್ತಿತ್ತು..
ನಾನು ನನ್ನ ಪಾಡಿಗೆ ತೊಡೆ ಮೇಲಿದ್ದ ಪುಸ್ತಕ ಓದಲು ಶುರು ಮಾಡಿದೆ..
ಎಲ್ಲಾ ರೈಲಿನ ಹಾಗೆ ಇದರಲ್ಲೂ ಚುರುಮುರಿ,ಬಿಸ್ಕತ್ತು,ಕಾಫಿ,ಟೀ ಮಾರುವವರು ಬರುತ್ತಲೇ ಇದ್ದರು,ನನ್ನ ಪಾಡಿಗೆ ಕಾದಂಬರಿ ಓದುತ್ತ,ಮಧ್ಯದಲ್ಲಿ ಪಕ್ಕದಲ್ಲಿದ್ದವನ ಜೊತೆ ಹರಟುತ್ತ ಕಾಲ ಕಳೆಯುತ್ತಿದ್ದಾಗ,ಬಿಸ್ಕತ್ತು ಮಾರುವವನು ಬಂದ..

ಪಕ್ಕದ ಸೀಟಿನ  ಆ ಹುಡುಗರು,ಬೇಕು ಎಂದಾಗ,ಮಕ್ಕಳ ಆಜ್ಞೆಯಂತೆ ಕೊಡಿಸಲು ಮುಂದಾದ ಅಪ್ಪನಿಗೆ,ಒಬ್ಬ ಕ್ರೀಂ ಬಿಸ್ಕೇಟು ಬೇಕು ಅಂದ,ಇನ್ನೊಬ್ಬ ಇನ್ನೇನೋ ಬೇಕು  ಎಂದ,ಮಾರುವವನು ಯಾವುದೋ ಒಂದ ತಗಂಡು ದುಡ್ಡು ಕೊಡಪ್ಪ,ಮುಂದಕ್ಕೆ ಹೋಗಬೇಕು ಅಂತ ಮನಸ್ಸಿನಲ್ಲೇ ಅಂದು ಕೊಂಡಿರಬೇಕು,ಅಲ್ಲಿಯವರೆಗೂ ಇತ್ತು ಅವರ ಕಾಟ,
ಯಾವುದೋ ಒಂದೂ ತಗಂಡ್ರು,ದುಡ್ಡು ಕೊಟ್ಟ,ಅವನು ಮುಂದಕ್ಕೆ ಹೋದ..
******************************************************************************
ಇನ್ನು ಸ್ವಲ್ಪ ಸಮಯದ ನಂತರ ನೀರು ಮಾರುವವನು ಬಂದ,ನನ್ನ ಹಿಂದಿನ ಸೀಟಿನಲ್ಲಿ ಕೂತಿದ್ದ ಹುಡುಗಿ  ಬೇಕೆಂದಾಗ ಅವನು ಒಂದು  ಬಾಟಲ್ ವಾಟರ್ ಕೊಟ್ಟ,ಅವಳು cold ನೀರು ಇಲ್ಲವ ಅಂತ ಕೇಳಿದಳು,ಅವನೇನು refrigerator
ಕೂಡ ಇಟ್ಟುಕೊಂಡು ಓಡಾಡ ಬೇಕಾ ?ಅವಳ ಮಾತಿಗೆ ಅತಿಶಯೋಕ್ತಿ ಅನ್ನಬೇಕೋ,ಅವಿವೇಕತನ ಅನ್ನಬೇಕೋ ಅಥವಾ ದುರಹಂಕಾರ ಅನ್ನಬೇಕೋ ಒಂದೂ ತಿಳಿಯಲಿಲ್ಲ.....
*******************************************************************************
ಸ್ವಲ್ಪ ಮುಂದೆ ಹೋದಾಗ  ಒಂದು  ಚಕ್ಕ ಮಗು ಚಡ್ಡಿಯಲ್ಲೇ ಮಲ ವಿಸರ್ಜನೆ ಮಾಡಿತು,ಅದರ ತಾಯಿ ಹತ್ತಿರವೇ ಇದ್ದ ಡೋರ್ ಬಳಿ ಹೋಗಿ ಆ ಮಗುವನ್ನು  ತೊಳೆಯಲು  ಮೊದಲು   ಮಾಡಿದಳು ,ಗಾಳಿ ಬೀಸುತ್ತಿದ್ದ ಕಾರಣ,ಆ ನೀರು ಗಾಳಿಗೆ ಹಿಂದೆ ಕಿಡಕಿ ಬಳಿ ಕೂತಿದ್ದವರಿಗೆ ಹಾರುತ್ತಿತ್ತು,ಅಲ್ಲೊಬ್ಬ  ಸಿಡಿದೆದ್ದು ಆ ಕಡೆ toilet ಇದೆ ಅಲ್ಲಿಗೆ ಹೋಗಿ ತೊಳೆಯಬಾರದ ,ಬುದ್ದಿ ಗಿದ್ದಿ  ಇದಿಯ ಅಂತ ದಬಾಯಿಸಿದ.
'ಅಯ್ಯೋ ಮಗು ಸರ್ ,ಏನ್ ಮಾಡ್ಲಿ ?"
"ಹೌದಮ್ಮ ಮಗೂನೆ,ತೊಳಿತಿರೋದು ನೀನ್ ತಾನೆ,ಅಲ್ಲೋಗು,ಇಲ್ಲಿ  ಕೂತಿರುವವರಿಗೆ ಮುಖಕ್ಕೆ ಹಾರುತ್ತಿದೆ,ಅಸಯ್ಯ ಅನ್ಸುತ್ತೆ"
ಅವಳ ವರ್ತನೆಗೆ ಏನನ್ನಬೇಕು....ನೀವೇ ಹೇಳಿ...
*************************************************************
ಹೀಗೆ ಮುಂದೆ ಹೋದಂತೆ,ಅಲ್ಲೊಂದು ಕ್ರಾಸಿಂಗ್ ಗೆ ಸ್ವಲ್ಪ ಸಮಯ  ನಿಲ್ಲಿಸಿ ಬಿಟ್ಟ,ಮತ್ತೆ ಕಾಫಿ,ಟೀ ಅದು ಇದು ವ್ಯಾಪಾರ ಶುರು ಆಯಿತು  ,ಸ್ವಲ್ಪ ಜೋರಾಗಿಯೇ  ಯಾಕೆ   ಅಂದ್ರೆ  ,ಕ್ರಾಸಿಂಗ್ ಇದೆಯಲ್ಲ  ಹಾಗಾಗಿ ..
ಕೂತು  ಕೂತು  ಸಾಕಾಗಿತ್ತು ,ಎಲ್ಲರಂತೆಯೇ  ನಾನು ಕೂಡ ಪುಸ್ತಕ ಅಲ್ಲೇ ಇಟ್ಟು( ಸೀಟು ಕಾದಿರಿಸಿದೆ .ಟವೆಲ್ಲು  ಹಾಕುವ  ಬುದ್ದಿ ನಮ್ಮ ಜಾಯಮಾನದಲ್ಲಿಯೇ  ಅಂಟಿಕೊಂಡು  ಬಂದಿದೆ ,ಯಾರೋ ಕೂತಿದ್ದ ಸೀಟಿಗೆ ಸೀಟು ಹಾಕುವವರು ,ಇಷ್ಟೊತ್ತು ಆ ಸೀಟನ್ನು  ವಿರಾಜಮಾನವಾಗಿ ಆಳಿ ,ಈಗ  ಬಿಟ್ಟು  ಕೊಡುತ್ತೀನ  ?ಖಂಡಿತ  ಇಲ್ಲ)
ಕೆಳಗಿಳಿದು platform ನಲ್ಲಿ  ಟೀ ಹೀರುತ್ತಾ  ನಿಂತು  ಬಿಟ್ಟೆ ,
ಅಷ್ಟೊತ್ತಿಗಾಗಲೇ  ಅಲ್ಲೊಂದು ಇಲ್ಲೊಂದು  ಗುಂಪುಗಳು  ಆಗಿ  ದೇಶದ  ಎಲ್ಲಾ ವಿಚಾರಗಳು ಎಲ್ಲರ  ಬಾಯಲ್ಲೂ  ರಾರಾಜಿಸುತ್ತಿದ್ದವು ,ನಾನು ಕೂಡ ಒಂದು   ಗುಂಪಿಗೆ  ಸದಸ್ಯನಾಗಿಬಿಟ್ಟೆ ,ಜೊತೆಗೆ ಮೇನಕ ,ಮಾಧುರಿ  ಏನಾಗಬಹುದು  ಮುಂದೆ ಎಂಬುದು  ತಲೆಯಲ್ಲಿ  ಹುಳು ಬಿಟ್ಟ ಹಾಗೆ ಆಗಿತ್ತು (ಮೇನಕ ,ಮಾಧುರಿ ನಾನು ಓದುತ್ತಿದ್ದ ಕಾದಂಬರಿಯ ಪಾತ್ರಗಳು )
ಅಷ್ಟರಲ್ಲೇ ಯಾರೋ ಒಬ್ಬ ಕಿಡಕಿಯಿಂದ ಕಾಫಿ ಕಪ್ ಅನ್ನು ಹೊರಗೆ ಎಸೆದ,ಅದು ನಮ್ಮ ಗುಂಪಿನ ಪಕ್ಕದಲ್ಲಿಯೇ ಬಿತ್ತು,ಆಗ ಅಲ್ಲೊಬ್ಬ ಅದನ್ನು ಕೆಳಕ್ಕೆ ತಳ್ಳುತ್ತ "ಈ ಮುಂಡೆ ಮಕ್ಕಳಿಗೆ ಮಾನ ಮರ್ಯಾದೆ ಇಲ್ಲ,ಹೀಗಾ ಬಿಸಾಡೋದು platform  ಮೇಲಕ್ಕೆ,?ಯಾರಾದ್ರೂ ಓಡಾಡುತ್ತಿರುತ್ತಾರೆ ಅನ್ನೋ common  ಸೆನ್ಸ್ ಕೂಡ ಇಲ್ಲ"
"ನಮ್ಮ ಜನಗಳಿಗೆ ಸರ್ಕಾರಿ ಜಾಗ ಅಂದ್ರೆ ಹೀಗೆ,ಹೆಂಗ್ ಬೇಕೋ ಹಂಗೆ,ಅವರ ಮನೇಲೂ ಈ ಥರಾ ಬಿಸಾಡುತ್ತಾರ ?" 
"ಅಯ್ಯೋ ಬಿಡಿ ಸರ್,ಏನ್ ಮಾಡಕ್ಕಾಗುತ್ತೆ ,ಈ ನನ್ ಮಕ್ಕಳಿಗೆ  ಬುದ್ಧಿ  ಬರಲ್ಲ,ಅವರು ಹೀಗೇನೆ"
"ಏನೋ ಸರ್,ನಮ್ಮ ಯಡ್ಡಿ ಏನಾದ್ರು? ಗಾಂಧೀ statue ಮುಂದೆ ಧರಣಿ ಮಾಡಿದರಂತೆ,ಇವಾಗ ಈ ಸಂಜೆ ಪೇಪರ್ ನಲ್ಲಿ  ಓದಿದೆ"
"ಏನಾದ್ರೂ ಮಾಡ್ಕೊಂಡು ಹಾಳಾಗಿ ಹೋಗಲಿ ಬಿಡಿ"
"ಏನ್ ಕೆಲಸ ಮಾಡಿದ್ದಾರೆ ಸರ್ ಇವರು,ಒಂದು ರೋಡ್ ನೆಟ್ಟಗೆ ರಿಪೇರಿ   ಮಾಡಿದ್ದಾರಾ?,ಜಪಾನ್ ನಲ್ಲಿ ಸುನಾಮಿ ಆದಾಗ ಒಂದು ವಾರಕ್ಕೆ ಯಾರ ಹೆಲ್ಪ್ ಇಲ್ಲದೆ ಅವರೇ ರೋಡ್  ರಿಪೇರಿ ಮಾಡಿದ್ದರೆ,ಇವರು ನೋಡಿದ್ರೆ  ಹೀಗೆ"
ಇನ್ನೊಬ್ಬ Hiroshima,naagasaki ವಿಷಯ ತೆಗೆದು ಶುರು ಮಾಡಿದ..
"ನಮ್ಮ ಶಿರಾಡಿ ಘಾಟ್ ರೋಡ್ ನಲ್ಲಿ ಮಳೆಗಾಲದಲ್ಲಿ ಹಾಳಾಗಿ ಹೋಗುತ್ತೆ,ಅವರು ರಿಪೇರಿ ಮಾಡೋ ಹೊತ್ತಿಗೆ ಮುಂದಿನ ಮಳೆಗಾಲ ಬಂದಿರುತ್ತೆ"ಅಂದೆ..
ಅಷ್ಟೊತ್ತಿಗೆ ಇನ್ನೊಬ್ಬ  ಈ ರೈಲು ಇಷ್ಟೊತ್ತು ನಿಂತು ಬಿಟ್ಟಿತಲ್ಲ ,ನಂಗೆ ಬಸ್ ಮಿಸ್ ಆಗಬಹುದು  ಅಂದ . 
ನನಗೂ ಅದೇ ತವಕ ಶುರು  ಆಯಿತು,ಯಾಕಂದ್ರೆ  ಅದೇ ಲಾಸ್ಟ್ ಬಸ್.
ಸ್ವಲ್ಪ ಹೊತ್ತಿನಲ್ಲೇ ಎದುರಿಂದ ಬಂದ ರೈಲು ವೇಗವಾಗಿ  ಹೋಯಿತು,ಇನ್ನೇನು ನಮ್ಮ ರೈಲಿನ ಸೈರನ್ ಕೂಗ ಬೇಕು ಅಷ್ಟೊತ್ತಿಗೆ platform ನಲ್ಲಿದ್ದ ಜನ ರೈಲಿಗೆ ಹತ್ತುತ್ತಿದ್ದರು..
ಒಬ್ಬ "ಇವನು ಇದೆ ಥರಾ ಫಾಸ್ಟ್ ಆಗಿ ಹೋಗಿ ಟೈಮ್ ಪಿಕ್ ಅಪ್ ಮಾಡ ಬೇಕು,ಆಗ್ಲೇ ಅರ್ಧ ಘಂಟೆ ಲೇಟ್ ಆಗಿ ಬಿಟ್ಟಿದೆ"ಅಂದರೆ,ಇನ್ನೊಬ್ಬ "ರೈಲು ಯಾವತ್ತು ಕರೆಕ್ಟ್ ಟೈಮ್ ಗೆ ಬರುತ್ತೆ ರೀ?"ಅಂದ..ಕಾಟು ಸತ್ಯದ ಮಾತು...
ಹೋಗ್ಲಿ ಬಿಡಪ್ಪ ಇನ್ನೇನ್ ಮಾಡಕ್ಕಾಗುತ್ತೆ ಅಂತ ಹತ್ತಿದೆವು..
ಅದಲ್ಲದೆ ಬೇರೆ ಬೇರೆ ವಿಷಯಗಳು ಪ್ರಸ್ತಾಪ ಆಗಿದ್ದವು..
ಮುಂದೆ ಸಾಗಿತು ನಮ್ಮ ಪಯಣ ಹಾಗೆಯೇ...ನನ್ನ ಲಾಸ್ಟ್ ಬಸ್ ಹಿಡಿದು ಬಂದು ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಸಮಯ  ೧೦ ಘಂಟೆ...
ಇದೆ ರೀತಿ ರೈಲು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ  ಇನ್ನು ವಿಚಿತ್ರ  ಘಟನೆಗಳಿಗೆ ಸಾಕ್ಷಿ ಆಗಿದ್ದೇನೆ..
ಹೀಗೆ ಸಾಗಿತು ನನ್ನ ಊರಿನ ಪ್ರಯಾಣ..

Saturday, May 7, 2011

ದೀಪಾವಳಿ !!


ನಾಳೆ ದೀಪಾವಳಿ,ಹಬ್ಬದ ತಯಾರಿ ಸ್ವಲ್ಪ ಜೋರಾಗಿಯೇ ನಡೆದಿದೆ....ಮನೆಯಲ್ಲಿ ಏನೋ ಒಂಥರಾ ಸಂಭ್ರಮ...೬ ವರ್ಷದ ಮುದ್ದಾದ ಮಗಳಿದ್ದಾಳೆ,ಅವಳಿಗೆ ಹಬ್ಬದ ಸಂಭ್ರಮ,ಪಟಾಕಿ ಎಲ್ಲಾ  ಕೊಡಿಸಿ ಹಾಗಿದೆ...
 ಇದ್ದಕಿದ್ದ ಹಾಗೆ  ಕಾಲಿಂಗ್ ಬೆಲ್ ರಿಂಗ್ ಆಯಿತು..ಯಾರು ಅಂತ ಬಾಗಿಲು ತೆಗೆದು ನೋಡಿದರೆ ರಮೇಶ...,ರಮೇಶ ಬರುತ್ತಾನೆ ಎಂದು ಕನಸಿನಲ್ಲಿಯೂ ನೆನೆಸಿರಲಿಲ್ಲ...
ರಮೇಶ ಮತ್ತು ನಾನು,ಇಬ್ಬರೂ ಕಾಲೇಜು ದಿನಗಳಲ್ಲಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದೆವು,ಅವನು ನನ್ನ ಸೀನಿಯರ್,ನಾನು ನನ್ನ ಡಿಗ್ರಿ ಕೊನೆ ವರ್ಷಕ್ಕೆ ಬಂದಾಗ ಅವನಾಗಲೇ
ಒಂದು ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ...ನನ್ನ ಡಿಗ್ರಿ ಮುಗಿದ ಮೇಲೆ ಇಬ್ಬರ ಮನೆಯಲ್ಲೂ ಒಪ್ಪಿಸಿ ಮದುವೆ ಮಾಡಿಕೊಳ್ಳುವುದಾಗಿ ಮಾತಾಗಿತ್ತು...ಆಗ ಅವನು ವಾರಕ್ಕೊಮ್ಮೆ ಊರಿಗೆ ಬಂದಾಗ ಇಬ್ಬರೂ ಭೇಟಿ ಮಾಡುತ್ತಿದ್ದೆವು....

ಬೇರೆ ದಿನಗಳಲಿ ಬರಿ ಫೋನು ಮತ್ತು ಇ-ಮೇಲ್ ನಲ್ಲಿ ನಮ್ಮಿಬ್ಬರ ಸಂಭಾಷಣೆ...
ಆದರೆ ದುರದೃಷ್ಟ ಅಂದರೆ ಇದೆ ಇರಬೇಕು.ಮನೆಯಲ್ಲಿ ಈ  ವಿಷಯ ಹೇಗೋ ತಿಳಿದು,ನನಗೆ ಮದುವೆ ನಿಶ್ಚಯ ಮಾಡಿ ಬಿಟ್ಟರು,ನಾನು ಮದುವೆ ಆದರೆ ರಮೆಶನನ್ನೇ ಆಗುತ್ತೇನೆ ಎಂದು ಹಠ ಹಿಡಿದರು ಕೂಡ ಯಾರು  ನನ್ನ ಮಾತನ್ನು ಕೇಳಲು ತಯಾರಿಲ್ಲ,ಕಡೆ ಪಕ್ಷ ನನ್ನ ಅಕ್ಕರೆಯ ಅಕ್ಕ ಕೂಡ,ಪ್ರೀತಿಯ ಅಣ್ಣ ಕೂಡ ಒಪ್ಪಲಿಲ್ಲ,ಅವನೇ ನನ್ನ ಮದುವೆಗೆ ಪಿತೂರಿ ಹೂಡಿದ್ದು...ಅವನೇ ಈ ಹುಡುಗನನ್ನು ಹುಡುಕಿದ್ದು, ಅಹಹ ಎಂತ ಹುಡುಗನನ್ನು ಹುಡುಕಿದ್ದಾನೆ,
ಅವನಿಗೂ ಮತ್ತು ರಮೇಶನಿಗೂ ಅಜ ಗಜಾಂತರ ವ್ಯತ್ಯಾಸ...

ನನ್ನ ತಾಯಿ ಕೂಡ ನನ್ನ ಮಾತನ್ನು ಕೇಳಲು ತಯಾರಿಲ್ಲ ,ಕಡೆ ಪಕ್ಷ ಮದುವೆ ಸ್ವಲ್ಪ ದಿನ ಮುಂದೂಡಿ,ನನ್ನ ಪರೀಕ್ಷೆ ಮುಗಿದ ಮೇಲೆ ಆಗುತ್ತೇನೆ ಎಂದರೂ ಯಾರು ಒಪ್ಪಲಿಲ್ಲ.
ಇಗಲೇ ಮದುವೆ ಆಗ ಬೇಕು ಎಂದರೆ ನಾನು ರಮೇಶನನ್ನು ಆಗುತ್ತೇನೆ ಎಂದೇ,ಆಗ ತಿಳಿಯಿತು ಇವರೆಲ್ಲ ಯಾಕೆ ಇವನನ್ನು ನನ್ನಿಂದ ದೂರ ಮಾಡುತ್ತಿದ್ದಾರೆ ಎಂದು,ನಮ್ಮಿಬ್ಬರದು ಬೇರೆ ಬೇರೆ ಜಾತಿ,ಇದೊಂದೇ ಕಾರಣಕ್ಕೆ ನಮ್ಮಿಬ್ಬರ ಮದುವೆಗೆ ಇವರ್ಯಾರು ಒಪ್ಪಲಿಲ್ಲ ....

ನನಗೆ ಮದುವೆ ಗೊತ್ತಾಗಿರುವ ವಿಷಯ ಅವನಿಗೆ ಇನ್ನೂ ತಿಳಿದಿರಲಿಲ್ಲ.,ನನ್ನ ಮೊಬೈಲನ್ನು ಅಣ್ಣ ಕಿತ್ತುಕೊಂಡಿದ್ದ .ಅವನಿಂದ ಫೋನ್ ಏನಾದ್ರೂ ಬಂದರೆ ಇವನೇ ಮಾತಾಡಿ ಅವನಿಗೆ ವಿಷಯ ಹೇಳುತ್ತಾನೋ ಏನೋ ಭಯ ಕಾಡುತಿತ್ತು..,ಅಥವಾ ಅವನಿಗೆ ಬೆದರಿಕೆ ಏನಾದ್ರೂ ಹಾಕಿದ್ದನೋ ಅದೂ ಗೊತ್ತಿಲ್ಲ . ...ನನ್ನ ಮದುವೆಯ ಸಮಯದಲ್ಲಿ ರಮೇಶ ಬಂದು ನನ್ನ ಅಣ್ಣನ ಜೊತೆ ಮಾತಾಡಿದ್ದ ಅಂತೆ...ಆದರೆ ಅವನಿಗೆ ಅಣ್ಣ ಮತ್ತು  ಅವನ ಸ್ನೇಹಿತರು ಸೇರಿ ಹೊಡೆದಿದ್ದರು... 
ನಂತರ ರಮೇಶ ಸುಮಾರು ದಿನಗಳ ಕಾಲ ಆಸ್ಪತ್ರೆಯಲ್ಲೇ ಇದ್ದನಂತೆ...ಹಾಗೆ ಇವರೆಲ್ಲ ಸೇರಿ ಥಳಿಸಿದ್ದರು.. ಆದಾದ ನಂತರ ನಾನು ಅವನನ್ನು ನೋಡುತ್ತಿರುವುದು ಇದೆ ಮೊದಲು...

ಕೊನೆಗೂ ಮನೆಯವರ ಇಚ್ಚೆಯಂತೆ ನನ್ನ ಮದುವೆ  ಅವರು ನೋಡಿದ ಹುಡುಗನ ಜೊತೆಗೆ ಆಯಿತು,ಈಗ ನಮಗೆ ೬ ವರ್ಷದ ಮಗಳಿದ್ದಾಳೆ...ನಾವು ತುಂಬ ಅನ್ಯೋನ್ಯ ವಾಗಿದ್ದೇವೆ ಎಂದು ತಿಳಿದಿದ್ದರೆ ಅದು ತಪ್ಪು,...
ಆ ಸಮಯದಲ್ಲಿ ಅಣ್ಣ ಅಕ್ಕ ಮತ್ತು ಮನೆಯವರಿಗೆಲ್ಲ ನನ್ನ ಗಂಡನ ವಿಷಯ ಗೊತ್ತಿದ್ದರು ಯಾರು ಕೂಡ ನನಗೆ ಹೇಳಿರಲಿಲ್ಲ,ಇವನಿಗೆ ಆಗಲೇ ಒಂದು ಮದುವೆ ಆಗಿ ಒಬ್ಬ ೧೨  ವರ್ಷದ ಮಗ ಕೂಡ ಇದ್ದನು,ಇವನ ಮೊದಲ ಹೆಂಡತಿಗೆ  ಕಾಯಿಲೆ ಇತ್ತು,ಅವಳು ಜಾಸ್ತಿ ದಿನ ಬದುಕುವುದಿಲ್ಲ ಎಂದು ಡಾಕ್ಟರ್ ಹೇಳಿದ್ದರಂತೆ...
ಆದ್ದರಿಂದ ಇವನಿಗೆ ಇನ್ನೊಂದು ಮದುವೆ ಆಗಲು ಕೆಲವರು  ಸಲಹೆ ನೀಡಿದ್ದರು ಮತ್ತು ಇವರು ನಮ್ಮ ದೂರದ ಸಂಭಂದಿ ಕೂಡ ಆಗಿದ್ದರು ..ನನ್ನ ಅಣ್ಣನಿಗೆ ಈ ವಿಷಯ ಮತ್ತು ನನ್ನ ರಮೇಶನ ಸ್ನೇಹದ ವಿಷಯ ಎರಡು ಒಟ್ಟಿಗೆ ಗೊತ್ತಾಗಿತ್ತು...
ಅಪ್ಪ ಅಮ್ಮನನ್ನು ಹೇಗೋ ಒಪ್ಪಿಸಿ ನನ್ನನ್ನು ಇವನ ಜೊತೆ ಮದುವೆ ಮಾಡಿಸಿ ಬಿಟ್ಟ...ನನ್ನ ಗಂಡ ನನಗಿಂತ ಏನಿಲ್ಲ ಅಂದರೂ ೧೫ ವರ್ಷ ದೊಡ್ಡವನು ..
ಆದ್ರೆ ನನಗೆ ಈ ಎಲ್ಲಾ ವಿಷಯ ಗೊತ್ತಾಗಿದ್ದು ನಾನು  ಇಲ್ಲಿಗೆ ಮದುವೆ ಆಗಿ ಬಂದು ೧ ವರ್ಷದ ನಂತರ..ಆದರೆ ಇವರ ಮೊದಲ ಹೆಂಡತಿ ಏಗೋ ಬದುಕಿದ್ದಾಳೆ,
ಆ ಕಾಯಿಲೆ ಕೂಡ ವಾಸಿಯಾಗಿದೆ..ಅವಳು ಮತ್ತು ಅವಳ ಮಗನನ್ನು ಅವಳ ತವರು ಮನೆಯಲ್ಲಿ ಇರಿಸಿದ್ದರಿಂದ ನನಗೆ ಈ  ವಿಷಯವೇ ಗೊತ್ತಿರಲಿಲ್ಲ,ಹೀಗೆ ಒಂದು ದಿನ ಅವಳು ಬಂದು ತನ್ನ ಪಾಲನ್ನು ಕೇಳಿದಾಗಲೇ ನನಗೆ ಗೊತ್ತಾಗಿದ್ದು,...
ಏನು ಮಾಡಬೇಕು ಎಂದು ಯೋಚಿಸುವ  ಸ್ಥಿತಿಯಲ್ಲಿ ಕೂಡ ನಾನು ಇರಲಿಲ್ಲ. ಒಬ್ಬ ಹೆಣ್ಣಾಗಿ ಇನ್ನೊಬ್ಬ ಹೆಣ್ಣಿನ ಸ್ಥಿತಿ ಏನು ಎಂದು ಅರ್ಥ ಮಾಡಿಕೊಳ್ಳಬಲ್ಲೆ,ಯಾರೇ ಆದರೂ ತನ್ನ ಗಂಡ ತಾನು ಬದುಕಿರುವಾಗಲೇ ಇನ್ನೊಬ್ಬಳನ್ನು ಮದುವೆ ಆಗುವುದನ್ನು ಸಹಿಸಿಕೊಳ್ಳುವುದಿಲ್ಲ.ನನಗೂ  ಅದೇ ರೀತಿಯ ಸ್ಥಿತಿ,ನನ್ನ ಗಂಡ  ನನಗಿಂತ ಮುಂಚೆ ಇನ್ನೋಬಳನ್ನು ವರಿಸಿದ್ದಾನೆ,ಆಕಾಶವೇ ಮೇಲೆ ಬಿದ್ದ ಹಾಗೆ ಆಯಿತು,ಯಾರನ್ನು ದೂರುವ ಪರಿಸ್ಥಿತಿ ಇಲ್ಲ ನನಗೆ....
ಇವನಿಗೆ ಅವಳ ಜೊತೆ ಸಂಸಾರ ಮಾಡಿ ಎಂದು ಹೇಳುವ ಧೈರ್ಯವೂ ಇಲ್ಲ.

ಕೊನೆಗೆ ಅವಳಿಗೆ ಕಾನೂನಿನ ಪ್ರಕಾರ ವಿಚ್ಚೇದನ ಕೊಟ್ಟು,ಅವಳಿಗೆ ಒಂದು ಮನೆಯನ್ನು ಕೊಡಿಸಿದ್ದಾಯಿತು..

ಸಮಯ ಕಳೆದ ನಂತರ ನಮಗೂ ಒಂದು ಮಗುವಾಯಿತು,ಆದರೆ ನನ್ನ ಗಂಡನಿಗೆ ನನ್ನ ಮೇಲೆ ಒಲವು ಕೂಡ ಕಡಿಮೆ ಆಯಿತು.ಯಾವಾಗಲು ಅವಳ ಮನೆಯಲ್ಲಿ ಇರುತ್ತಾನೆ,ಆಫೀಸು ಮುಗಿದ ಮೇಲೆ ಅವಳ ಮನೆಗೇ ಹೋಗುತ್ತಾನೆ,...
 ನನ್ನ ಅಡುಗೆಯೆಲ್ಲ ಮುಸುರೆಗೆ ಹಾಕುವುದು,ಅಪ್ಪ ಎಲ್ಲಿ ಎಂದು ಕೇಳಿದ ಮಗಳಿಗೆ ಆಫಿಸಿನಲ್ಲಿ ಕೆಲಸ ಇರುವುದರಿಂದ ಇವತ್ತು ಬರಲ್ಲ ನಾಳೆ ಬರುತ್ತಾರೆ ಎಂದು ಸುಳ್ಳು ಹೇಳುವುದು ರೂಡಿ ಆಗಿಬಿಟ್ಟಿದೆ.ಅಲ್ಲದೆ ಅವರು ನನ್ನ ಮಗಳ  ಸ್ಕೂಲಿನ ಫೀ ಕೂಡ ಸರಿಯಾಗಿ ದುಡ್ಡು ಕೊಡುತ್ತಿಲ್ಲ...ಆದರೆ ಅವಳ ಮಗನಿಗೆ ಕಾಲೇಜಿಗೆ ಡೊನೇಶನ್ ಕೊಡುತ್ತಾನೆ...ಮನೆ  ಖರ್ಚಿಗೆ ಕೂಡ ಕೊಡುತ್ತಿಲ್ಲ..ಏನೋ ನಂಬಿಕೆ ಇರುವುದರಿಂದ ನಮ್ಮ ಬೀದಿಯ ಅಂಗಡಿ ಮೂರ್ತಿ  ಸಾಲ ಕೊಡುತ್ತಾರೆ,ಸಾಲ  ವಾಪಸ್ ಕೊಟ್ಟು ಆಗಲೇ ೩ ತಿಂಗಳಾಗಿದೆ.ನಾಳೆ ಹಬ್ಬಕ್ಕೆ ಮನೆಗೆ ಬರುತ್ತಾರೆ ಎಂಬುದು ಅನುಮಾನ...

ಕಾಲಿಂಗ್ ಬೆಲ್ ಆದಾಗ ಬಹುಷಃ ನನ್ನ ಗಂಡ ಎಂದು ಬಾಗಿಲು ತೆರೆದರೆ ರಮೇಶ ಬಂದು ನಿಂತಿದ್ದಾನೆ...,ಇಂಥ ಸನ್ನಿವೇಶದಲ್ಲಿ ಅವನನ್ನು ನೋಡಿ ಖುಷಿ  ಪಡಬೇಕೋ ಒಂದೂ ತಿಳಿಯುತ್ತಿಲ್ಲ,ಅವನನ್ನು ನೋಡಿ ಸುಮಾರು ೮ ವರ್ಷ ಆಗಿದೆ,ಅವನನ್ನು ನೋಡುವ ಅವಕಾಶವೇ ಸಿಕ್ಕಿರಲಿಲ್ಲ,

ಈಗ ಅಕಸ್ಮಾತಾಗಿ ಮನೆಗೆ ಬಂದು ಬಿಟ್ಟಿದ್ದಾನೆ,ನಾನು ಒಳಗೆ ಬರಲು ಹೇಳಿ ಮುಂದೆ ನಡೆದೇ,ಅವನಿಗೆ ಮದುವೆ ಆಗಿದೆ ಎಂದು ಭಾವಿಸಿದ್ದೆ  ,ಆದರೆ ಇನ್ನೂ ಆಗಿಲ್ಲ,ಕಾರಣ ಕೇಳಿದರೆ ಆದರೆ ನಿನ್ನನ್ನೇ ಆಗುವುದು,ಇಲ್ಲ ಅಂದರೆ  ಈಗೆ ಇರುತ್ತೀನಿ  ಅಂತ ಬೇರೆ ಹೇಳುತ್ತಿದ್ದಾನೆ,ಅವನ ತಂಗಿ ಮತ್ತು ಇಬ್ಬರೂ ತಮ್ಮಂದಿರ ಮದುವೆ ಆಗಿದ್ದರು ಇವನು ಇನ್ನು ಆಗಿಲ್ಲ...

ಇಷ್ಟು ವರ್ಷ ನನಗೆ ತೊಂದರೆ ಕೊಡಬಾರದು ಎಂಬ ಕಾರಣಕ್ಕೆ ನನ್ನಿಂದ ದೂರ ಇದ್ದ...ಈಗ ನನ್ನ ಕಾಲೇಜು ಸ್ನೇಹಿತರಿಂದ ನನ್ನ ಅಡ್ರೆಸ್ಸ್ ತೆಗೆದುಕೊಂಡು ಬಂದಿದ್ದಾನೆ...

ಇವನು ಬಂದಾಗ ಸಧ್ಯ ನನ್ನ ಗಂಡ ಮನೆಯಲ್ಲಿ ಇಲ್ಲ, ಈಗ  ನನ್ನ ಗಂಡನಿಗೆ ಡಿವೋರ್ಸ್ ಕೊಟ್ಟು ತನ್ನನ್ನು ಮದುವೆ ಆಗಲು ಹೇಳುತ್ತಿದ್ದಾನೆ...
 ನನ್ನ ಮಗಳನ್ನು ಕೂಡ ಕರೆದು ಕೊಂಡು ಹೋಗೋಣ ಎನ್ನುತ್ತಿದ್ದಾನೆ.ಸ್ವಲ್ಪ ಸಮಯ ಯೋಚಿಸ ಬೇಕು ಎಂದು ಹೇಳಿ ಅವನನ್ನು ಕಳಿಸಿ ಬಿಟ್ಟಿದ್ದೇನೆ,ಆದರೆ ಈಗ  ನನ್ನ ಮನಸ್ಸಿನಲ್ಲಿ ಆಗುತ್ತಿರುವ ಗೊಂದಲ ಒಂದೇ ಎರಡೇ?

ಒಬ್ಬ ಗಂಡು ಇನ್ನೊಬ್ಬ ಹೆಂಗಸನ್ನು ಮದುವೆ ಆದರೆ ಸಮಾಜ ಒಪ್ಪುತ್ತದೆ,ಆದರೆ ಒಬ್ಬ ಹೆಣ್ಣು ಇನ್ನೊಬ್ಬ ಗಂಡಸನ್ನು ಮದುವೆ ಆದರೆ ಸಮಮಾಜ ಒಪ್ಪುವುದಿಲ್ಲ,ಅದೂ ನೋಡುವ ದೃಷ್ಟಿಯೇ ಬೇರೆ ಆಗಿರುತ್ತದೆ..
ಅಲ್ಲದೆ ಇಷ್ಟು ದಿನ ನನ್ನ ಗಂಡನನ್ನು ಅಪ್ಪ ಎಂದು ಕರೆಯುವ ಮಗಳಿಗೆ ಇವನನ್ನು ಏನು ಅಂತ  ಪರಿಚಯ ಮಾಡಿಕೊಡಲಿ...ಇವನನ್ನು ಏನು ಅಂತ ಕರಿಬೇಕು ಎಂದು  ಹೇಳಿಕೊಡಲಿ?
ಅವಳು ದೊಡ್ಡವಳಾದ ಮೇಲೆ ಕೂಡ ಅವಳಿಗೆ ಈ ವಿಷಯ ಗೊತ್ತಾದರೆ ಅವಳ ಮೇಲೆ ಇದು ಯಾವ ರೀತಿ ಪರಿಣಾಮ ಬೀರಬಹುದು...ನನ್ನ ಮೇಲೆ ಅವಳಿಗೆ ಯಾವ ಭಾವನೆ ಹುಟ್ಟಬಹುದು...
ಅಲ್ಲದೆ ತವರು ಮನೆಯವರ  ಮಾನ  ಮರ್ಯಾದೆ  ಹಾಳು ಮಾಡಿದ  ಹಾಗೆ  ಆಗುತ್ತದೆ ..
ಇದನೆಲ್ಲ  ಯೋಚಿಸಿದರೆ ಬೇಕಿತ್ತಾ ಈ  ಜನ್ಮ ಎಂಬ ಕೊರಗು...ಯಾವಾಗಲೋ ಸಾಯ ಬೇಕು ಎಂದು ನಿರ್ಧಾರ ಮಾಡಿ ಮಗಳ ಮುಖ ನೋಡಿ ಎಷ್ಟಾದರೂ ಕಷ್ಟ ಅನುಭವಿಸಲು ತಯಾರಾಗಿದ್ದೇನೆ...ನಾನು ಸತ್ತರೆ ಅವಳನ್ನು ನನ್ನ ಗಂಡ ಅಂತೂ ಸರಿಯಾಗಿ ಸಾಕುವುದಿಲ್ಲ..ನಾನಿರುವಾಗಲೇ ಹೀಗೆ,ಇನ್ನು ನಾನು ಸತು ಹೋದೆ ಅಂದರೆ ಅವಳ ಜೀವನವನ್ನು ಹಾಳು  ಮಾಡುತ್ತಾನೆ...ಈ ಕಾರಣಕ್ಕೆ ಭಂಡ ಧೈರ್ಯ ಮಾಡಿ ಸಾಯುವ ನಿರ್ಧಾರವನ್ನು ದೂರ ಮಾಡಿದ್ದು....
ಈ ಯೋಚನೆಯಲ್ಲೇ ರಾತ್ರಿ ಪೂರ ನಿದ್ದೆ ಇಲ್ಲದೆ ಕಳೆದದ್ದಾಯಿತು...
ನನ್ನ  ಮಗಳ  ಭವಿಷ್ಯದ ದೃಷ್ಟಿಯಲ್ಲಿ ನೋಡಿದರೆ ನಾನು ರಮೇಶನನ್ನು ಮದುವೆ ಆಗುವುದೇ ಒಳ್ಳೆಯದು ಅನಿಸುತ್ತಿದೆ...ಮಗಳಿಗೆ ಸ್ವಲ್ಪ ಬುದ್ಧಿ ಬಂದ ವಯಸ್ಸಿಗೆ ಈ ವಿಷಯದ ಬಗ್ಗೆ ತಿಳಿ ಹೇಳಬಹುದು ಎಂದು ನನ್ನ ಅನಿಸಿಕೆ...
ರಮೇಶ ಇವಳನ್ನು ಚೆನ್ನಾಗಿ ನೋಡಿಕೊಳ್ಳುತ್ತಾನೆ ಮತ್ತು ಅವಳ ವಿಧ್ಯಾಭ್ಯಾಸಕ್ಕೆ ಸಹಕರಿಸುತ್ತಾನೆ ಎಂದು ನನ್ನ ನಂಬಿಕೆ...
ಕತ್ತಲು ತುಂಬಿರುವ ನನ್ನ ಬದುಕಲ್ಲಿ ಈ ದೀಪಾವಳಿಯ ದಿನ ರಮೇಶ ಬೆಳಕು ಚೆಲ್ಲಬಹುದು ಎಂಬ ವಿಶ್ವಾಸ ಇದೆ,
ಆದರೂ ಏನು ಮಾಡಬೇಕು ಎಂಬ ಧೃಡ ನಿರ್ಧಾರ ಒಂದಿಲ್ಲ....
ರಮೇಶನ ಜೊತೆ ಹೋದರೆ ಕಟ್ಟಿಕೊಂಡ ಗಂಡನನ್ನು ಬಿಟ್ಟವಳು ಎಂಬ ಹಣೆ ಪಟ್ಟಿ..ಅಲ್ಲದೆ ಗಂಡನ ವರ್ತನೆ  ಈ ರೀತಿ...ಹೇಗೆ ಸಾಗಿಸಲಿ ನನ್ನ ಜೀವನ...ಹೇಗೆ ಸಾಕಲಿ ನನ್ನ ಮಗಳನ್ನ?

Thursday, April 28, 2011

ಅಳಿಯ ದೇವರು!!

ಅದೊಂದು ಸುಂದರ  ಹಳ್ಳಿ.ಅಲ್ಲೊಂದು ಸಣ್ಣ  ಸಂಸಾರ.ಆ ಮನೆಯಲ್ಲಿ ಒಂದು ಅಜ್ಜಿಯು ಇತ್ತು.ತನ್ನ ಒಬ್ಬಳೇ ಮಗಳ ಮದುವೆ ಆಗಿದೆ,ಹಾಗೆ ತನ್ನ ಮಗನ ಮದುವೆ ಕೂಡ ಒಂದೆರಡು ವರ್ಷದ ಮುಂಚೆಯಷ್ಟೇ ಆಗಿದೆ.
ಗಂಡ  ತೀರಿಕೊಂಡಿದ್ದರೂ ಆ ನೋವನ್ನು ಮರೆತು ಮೊಮ್ಮಕ್ಕಳೊಂದಿಗೆ ಕಾಲ ಕಳೆಯುತ್ತಾ,ತೋಟದಲ್ಲಿ ಏನಾದರು ಸಣ್ಣ ಪುಟ್ಟ ಕೆಲಸ ಮಾಡುತ್ತಾ ಬದುಕು ಸಾಗಿಸುತ್ತಿದ್ದಾಳೆ...ಈ ಅಜ್ಜಿಯ ಮಗ ಆ ಊರಿನ ದೇವಸ್ಥಾನದ ಕಾರ್ಯದರ್ಶಿ,ಊರಲ್ಲಿ ಒಳ್ಳೆ ಮರ್ಯಾದೆ ಗೌರವ ಇದೆ..ತನ್ನ ಗಂಡ ತೀರಿಕೊಂಡ ಮೇಲೆ ಆ ಸ್ಥಾನ ಆಕೆಯ ಮಗನಿಗೆ ಸಿಕ್ಕಿತು.
ಹೀಗೆ ಒಂದು ದಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಆಕೆಯ ಪಾದಕ್ಕೆ ಒಂದು ಮುಳ್ಳು ಹೊಕ್ಕಿತು.ಅದು ಸಾಧಾರಣ  ಮುಳ್ಲಾಗಿರಲಿಲ್ಲ,ಅದೊಂದು ವಿಷ ಪೂರಿತ ಮುಳ್ಳು...
ಆ ಮುಳ್ಳಿನಿಂದ ಆಕೆಯ ಪಾದದಲ್ಲಿ ಸಣ್ಣ ಗಾಯ ಆಯಿತು,ಅದು ಕ್ರಮೇಣ ದೊಡ್ಡದಾಗುತ್ತ ಹೋಯಿತು...ಆಕೆ ಚಿಕ್ಕಂದಿನಿಂದ  ಹೊಲ ಗದ್ದೆಗಳಲ್ಲಿ ಒಡನಾಟ ಜಾಸ್ತಿ ಇತ್ತಾದ್ದರಿಂದ ಇದೊಂದು ಮಾಮೂಲಿ ಎಂದು ಸುಮ್ಮನಾದಳು.ಅದು ದೊಡ್ಡ ಗಾಯವಾದಮೇಲೆ ಅವರು ಆಸ್ಪತ್ರೆಯ ಕಡೆ ಹೋಗಿದ್ದು.
ಆಗ ಗೊತ್ತಾಯಿತು ಆಗಲೇ ಆಕೆಗೆ ಗ್ಯಾಂಗ್ರಿನ್  ಕಾಯಿಲೆ ತಗುಲಿ ಆಗಿದೆ ಎಂದು..ಕಾಲು ಕತ್ತರಿಸಬೇಕು ಇಲ್ಲವಾದರೆ ಆಕೆಯ ಸಾವು ಹತ್ತಿರದಲ್ಲೇ  ಇದೆ ಎಂದು ವೈದ್ಯರು ಸಾರಾಸಗಟಾಗಿ ಹೇಳಿದರು..
ಯಾರೋ ಒಬ್ಬರು ನೆಂಟರು ನಾಟಿ ವೈದ್ಯರ ಬಳಿ ಆದರೆ ಇದು ವಾಸಿ ಆಗುತ್ತದೆ ಎಂದು ಹೇಳಿದರು,ಅದರಂತೆ ಅಲ್ಲಿಗೆ ಹೋದರೂ ಅಲ್ಲಿ ಕೂಡ  ವಾಸಿ ಆಗದೆ,ಅವರು ಕೂಡ ಈಗಾಗಲೇ ಸಮಯ ಮೀರಿ ಆಗಿದೆ,ಏನು ಮಾಡುವುದಕ್ಕೆ ಆಗುವುದಿಲ್ಲ ಎಂದು ಹೇಳಿದರು.
ಏನು ತೋಚದೆ ವಿಧಿ ಬರಹ ಹೀಗೆ ಇರಬಹುದೇನೋ ಎಂದು ಆಕೆಯನ್ನು ಮನೆಗೆ ವಾಪಸ್ ಕರೆ ತಂದರು..
ಆದರೂ  ಆಕೆಯ ಅಳಿಯ ಮಾತ್ರ ಮತ್ತೆ ಬೇರೆ ಕಡೆ ಒಳ್ಳೆಯ ಆಸ್ಪತ್ರೆಗೆ ಸೇರಿಸಲು ತನ್ನ ಹೆಂಡತಿಯೊಂದಿಗೆ ಒತ್ತಾಯ ಮಾಡುತ್ತಾನೆ ,ಆದರೆ ಆಕೆಯ ಮಗ ಮಾತ್ರ ಒಪ್ಪಲಿಲ್ಲ,ಎಲ್ಲಿ ದುಡ್ಡು ಕೊಡಬೇಕಾಗುತ್ತದೋ ಎಂದು..
ಆ ಅಳಿಯ ಬೇರೆ ಉರಿನಲ್ಲಿ ಕೆಲಸದ ಮೇಲೆ ಇದ್ದ ಕಾರಣ ತನಗೆ ಸ್ವತಃ ಬಂದು ತನ್ನ ಅತ್ತೆಯನ್ನು ನೋಡಲು ಸಾಧ್ಯವಾಗಲಿಲ್ಲ,ಹೇಗಾದರೂ ಮಾಡಿ ಆಕೆಯನ್ನು ಆ ಕಾಯಿಲೆ ಇಂದ  ಪಾರು ಮಾಡಬೇಕು,ಆದಷ್ಟು ಇನ್ನಷ್ಟು ದಿನ ಬದುಕುವ ಹಾಗೆ ಮಾಡಬೇಕು ಎಂದು ತನ್ನ ಹೆಂಡತಿಗೆ ಹೇಳಿ ಆಸ್ಪತ್ರೆಗೆ ಸೇರಿಸುತ್ತಾನೆ,ಆಸ್ಪತ್ರೆಯ ಖರ್ಚನ್ನೆಲ್ಲ ತಾನೇ ನೋಡಿಕೊಳ್ಳುವುದಾಗಿ ,ಆಸ್ಪತ್ರೆಗೆ ಸೇರಿಸಲು ಬೇಡ ಅಂದಿದ್ದ ಆಕೆಯ ಮಗನಿಗೆ ಹೇಳುತ್ತಾನೆ..
ಇತ್ತ ಆಸ್ಪತ್ರೆಯಲ್ಲಿ ನಿಧಾನವಾಗಿ ಸ್ವಲ್ಪ ಮಟ್ಟಿಗೆ  ಚೇತರಿಸಿಕೊಳ್ಳುತ್ತಿದ್ದಾಳೆ  ಅಜ್ಜಿ,ಆದರೆ ಮಗ ಮಾತ್ರ ಆಕೆ ಇನ್ನೇನು ಸತ್ತು ಹೋಗುತ್ತಾಳೆ ಎಂದು ವೈದ್ಯರು ಹೇಳಿದ್ದಾರೆ  ಎಂದು ತಿಳಿದು,ಇನ್ನೂ ಜಾಸ್ತಿ ದಿನ ಬದುಕುವುದಿಲ್ಲ ಎಂದು ನಂಬಿ ,ದೇವಸ್ಥಾನದ ಕಾರ್ಯಕ್ರಮಗಳಿಗೆ ಬರುವ  ಹೊಲಗೇರಿಯ   ವಾದ್ಯದವರಿಗೆ  ತನ್ನ ತಾಯಿಯ  ಶವ ಸಂಸ್ಕಾರಕ್ಕೂ ಬರಬೇಕು ಎಂದು ಶವ ಸಂಸ್ಕಾರಕ್ಕೆ ಅಣಿ ಮಾಡಿಕೊಳ್ಳುತ್ತಿದ್ದಾನೆ.ಹಾಗೆಯೇ ಶಾಮಿಯಾನ,ಉಳಿ ಅನ್ನ ಮಾಡಲು ಪಕ್ಕದ ಊರಿನ ಬ್ರಾಹ್ಮಣರಿಗೆ ಅಡುಗೆಗೆ ,ಗುಂಡಿ ತೋಡಲು ಕೂಲಿಯವರಿಗೆ ಎಲ್ಲಾ ಹೇಳಿಬಿಟ್ಟಿದ್ದಾನೆ...
ಹೀಗೆ ತನ್ನ ತಾಯಿಯ ಜೀವದ ಬಗ್ಗೆ ಸ್ವಲ್ಪವೂ ಯೋಚಿಸದೆ ಆಕೆಯ ಶವ ಸಂಸ್ಕಾರದ ಬಗ್ಗೆ ಯೋಚಿಸುತ್ತಿದ್ದಾನೆ,ಆದರೆ ಅವನ ಹೆಂಡತಿ ಮಾತ್ರ ಆಸ್ಪತ್ರೆಯಲ್ಲಿ ಅಜ್ಜಿಯ ಮಗಳೊಂದಿಗೆ  ಅಂದರೆ ತನ್ನ ಅತ್ತಿಗೆಯೊಂದಿಗೆ ಅಜ್ಜಿಯ ಸೇವೆ ಮಾಡುತ್ತಿದ್ದಾಳೆ..
ಅಜ್ಜಿಯ ಅಳಿಯನೇ ಇದೆಲ್ಲರ ಖರ್ಚು ನೋಡಿಕೊಳ್ಳುತ್ತಿದ್ದಾನೆ,ಆದರೆ ಅವರು ಮಾತ್ರ ಬೇರೆ ಉರಿನಲ್ಲಿ ತನ್ನ ಕೆಲಸದ ಮೇಲೆ ಇರುವುದರಿಂದ ಬಂದು ನೋಡಲು ಹಾಗಿರಿವುದಿಲ್ಲ,ಹೀಗೆ ಸ್ವಲ್ಪ ದಿನ ಆದ ಮೇಲೆ ಆಸ್ಪತ್ರೆ  ಇಂದ ಮನೆಗೆ ವಾಪಸ್ ಕರೆದುಕೊಂಡು ಬರುತ್ತಾರೆ,ಸ್ವಲ್ಪ  ಲವಲವಿಕೆ ಅಜ್ಜಿಯ ಮುಖದಲ್ಲಿ ಇತ್ತು,ಆದರೂ ತನ್ನ ಮಗ ಒಂದು ದಿನ ತನ್ನನ್ನು ನೋಡಲು ಬಂದಿಲ್ಲ ,ಅವನ ಮನೆಯಲ್ಲಿ ಇರುವುದಕ್ಕೂ ಸ್ವಲ್ಪ ಬೇಸರ ಇತ್ತು..
ಆದರೆ ಮಗ ಮಾತ್ರ ಇನ್ನು ಆಕೆ ಜಾಸ್ತಿ ದಿನ ಬದುಕುವುದಿಲ್ಲ ಎಂದೇ ಭಾವಿಸಿದ್ದಾನೆ...
ಹೀಗೆ ಸುಮಾರು ೨ ವರ್ಷ ಯಾಕೆ ಬದುಕಿರುತ್ತಾಳೆ,ಇಷ್ಟು ದಿನ ಆಕೆಯ ಬದುಕಿಗ ಕಾರಣನಾದ ಅಳಿಯ ಮಾತ್ರ ಒಂದು ದಿನ ನೋಡಲು ಬಂದಿರಲಿಲ್ಲ,ಅದಾರೆ ಅವನಲ್ಲಿ ಪ್ರೀತಿ ಇದೆ.ಬರಬೇಕೆಂಬ ಮನಸ್ಸಿದ್ದರೂ ಕೆಲಸದ ಒತ್ತಡ ದಿಂದ ಬರಲು ಆಗಿಲ್ಲ...
ಹೀಗ ಮಾತ್ರ ಅಜ್ಜಿ ದಿನ ಏಣಿಸುವ ಪರಿಸ್ಥಿತಿಯಲ್ಲಿ ಇದ್ದಾಳೆ,ಅವಳ ಮೈಯಲ್ಲಿ ಶಕ್ತಿ ಪೂರ್ತಿ ಕುಂದಿ ಹೋಗಿದೆ.ಆಕೆಗೂ ತಾನು ಸಾಯುವ ದಿನ ಹತ್ತಿರ ಬಂದಿದೆ ಎಂದು ತಿಳಿಯಿತು,ಕೊನೆಗೆ ತನ್ನ ಅಳಿಯನನ್ನು ಆದಷ್ಟು ಬೇಗೆ ಕರೆಸಿ ಎಂದು ಗೋಳಿಟ್ಟಳು ..
ಅಳಿಯ ಕೂಡ ಈ ವಿಷಯ ತಿಳಿದು ಒಂದು ದಿನ ಬಿಡುವು ಮಾಡಿಕೊಂಡು ಬರುತ್ತಾನೆ,ಹಾಸಿಗೆ ಹಿಡಿದಿದ್ದ ಆಕೆಗೆ ಒಂದಷ್ಟು  ಅನ್ನ ತಿನ್ನಿಸಿ ,ಸ್ವಲ್ಪ  ನೀರು ಕುಡಿಸುತ್ತಾನೆ..ಆದಾದ ಸ್ವಲ್ಪ ಒಟ್ಟಿಗೆ ಆಕೆ ನಿರಾಳವಾಗಿ ಪ್ರಾಣ ಬಿಡುತ್ತಾಳೆ,ಕೊನೆ ಕಾಲದಲ್ಲಿ ಮಗ ಚೆನ್ನಾಗಿ ನೋಡಿಕೊಳ್ಳದಿದ್ದಾಗ ಅಳಿಯ ಆದಷ್ಟು ಪ್ರೀತಿ  ತೋರಿಸಿದ್ದ,
ಮಗ  ಬಹು ದಿನದಿಂದ ಶವ ಸಂಸ್ಕಾರಕ್ಕೆ ಕಾಯುತ್ತಿದ್ದ ,ಅದಕ್ಕೆ ಮುಂಚೆಯೇ ಎಲ್ಲರಿಗೂ ಹೇಳಿದ್ದ,
ಆದರೆ ಆ ದಿನ ಮನೆಗೆ ಬಂದ ನೆಂಟರು,ಬಂಧುಗಳು,ಉರ ಜನ ಇವರೆಲ್ಲರ ಬಾಯಲ್ಲಿ "ಇಂತ ಅಳಿಯನನ್ನು ಪಡೆಯಕ್ಕೆ ಎಷ್ಟು ಪುಣ್ಯ ಮಾಡಿದ್ದಳೋ ಈ ಅಜ್ಜಿ "
"ಮಗ ಸರಿಯಾಗಿ ನೋಡಿ ಕೊಳ್ಳಲಿಲ್ಲ,ಆದರೆ ಅಳಿಯ ಮಾತ್ರ ಎಷ್ಟು ಚೆನ್ನಾಗಿ ನೋಡಿಕೊಂಡ "
"ಕೊನೆ ತುತ್ತು ಅಳಿಯನ ಕೈಲೆ ತಿನ್ನಬೇಕು ಅಂತ ಇಷ್ಟು ದಿನ ಕಾಯುತ್ತಿದ್ದಲೋ ಏನೋ?"ಹೀಗೆ ಮಾತಾಡಿಕೊಳ್ಳುತ್ತಿದ್ದರು.
(ಮೊದಲ ಬಾರಿ ಕಥೆ ಬರೆಯುವ ಪ್ರಯತ್ನ ಮಾಡಿದ್ದೇನೆ,ತಪ್ಪಿದ್ದರೆ ತಿಳಿಸಿ,ತಿದ್ದಿಕೊಳ್ಳುವೆ,
ಎಡವಿದ್ದರೆ ಎಬ್ಬಿಸಿ, ಎಚ್ಚರಗೊಲ್ಲುವೆ....)

Sunday, April 17, 2011

ಒಂದು ಮಧುರ ಪ್ರೇಮ ಕಥೆ.....!!!!!!!!!!!


Onsite offer!!
ಈ ಐಟಿ ಕಂಪನಿ ಅಂದ ಮೇಲೆ ಅವಾಗ  ಅವಾಗ  ಬರ್ತಾ  ಇರುತ್ತೆ !!!
ಫ್ಲೈಟ್ ನಲ್ಲಿ  ಕೂತಿದ್ದೀನಿ  ,ಇನ್ನೊಮ್ಮೆ  ಆನ್ ಸೈಟ್ ..... .ಪ್ಲೇನ್  ಟೇಕ್  ಆಫ್  ಆಗಿದೆ  ,ಆಕಾಶದಲ್ಲಿ  ತೇಲುತ್ತ  ಇದೀನಿ . ಹಾಗೆ ಕಿಡಕಿಯಿಂದ   ಹೊರಗಡೆ  ಸುಮ್ಮನೆ ನೋಡಿದೆ ,ಸಂಜೆಯ  ಸುಂದರ  ದೃಶ್ಯಗಳು .ಸ್ವರ್ಗದಂತೆ   ಭಾಸವಾಗುತ್ತ  ಇದೆ .
ಆ  ಸುಂದರ ದೃಶ್ಯದಲ್ಲಿ  ನನ್ನಲ್ಲಿ  ನಾನು  ಕಳೆದು  ಹೋಗಿಬಿಟ್ತಿದ್ದೆ...

ಯಾರದೋ  ಧ್ವನಿ  ಎಚ್ಚರಿಸಿತು "excuse me sir, would you like to have something?"

ಹಿಂದಕ್ಕೆ  ತಿರುಗಿ  ನೋಡಿದ್ರೆ  ನನಗೆ  ಆಶ್ಚರ್ಯ ,ನನ್ನ  ಸುಂದರ  ಹಳೆ  ಸ್ಕೂಲ್  ಮೇಟ್  ಬಿಂದು  .
"ಏ ಬಿಂದು  , ನೀನು ? ಇಲ್ಲಿ ? ವಾವ್  .........ಇಷ್ಟು  ಚೆನ್ನಾಗಿ ಕಾಣ್ತಿದ್ಯ ,........  ಅದು  air-hostess ಡ್ರೆಸ್ನಲ್ಲಿ "

ಸೀರೆ  ಉಟ್ಟು ,ಮಲ್ಲಿಗೆ  ಹೂವು  ಮುಡಿದಿದ್ದರೆ  ಇನ್ನೂ  ಚೆನ್ನಾಗಿ  ಕಾಣುತ್ತಿದ್ದಳು .ಮುದ್ದಾದ ಬೊಂಬೆಯ  ಹಾಗೆ ...ಆದರೆ ಅವರಿಗೆ ಅದೇ ಯೂನಿ ಫಾರಂ ...
"ಗಿರಿ ,ವಾವ್ ,ನಂಗೆ  ನಂಬಕ್ಕೆ  ಆಗ್ತಿಲ್ಲ .....ಏನಿಲ್ಲಿ .ಓಹ್  ಸಾರೀ .ನಾನು  ಡ್ಯೂಟಿಯಲ್ಲಿ  ಇದೀನಿ ,ಆಮೇಲೆ  ಮಾತಡ್ತಿನಿ "
ಒಂದು  ಕಿರು  ನಗೆ  ಬೀರಿ ,ಆಕಡೆ  ಹೋದಳು .ನನ್ನ  ಕಣ್ಣಿಗೆ  ನಂಬಕ್ಕೆ  ಆಗ್ತಿಲ್ಲ ..ನನ್ನ  ಸ್ಕೂಲ್  ದಿನಗಳ  ನೆನಪಾಯಿತು..

ಅವಳ  ಬಗ್ಗೆ  ಎಷ್ಟು  ತಲೆ  ಕೆಡಿಸ್ಕೊಂಡಿದ್ದೆ ,ಸ್ಕೂಲ್  ಬಿಟ್ಟಮೇಲೆ  ಅವಳ  ಹಿಂದೆ  ಫಾಲೋ  ಮಾಡ್ಕೊಂಡ್ ಹೋಗೋದು..... ಎಷ್ಟೊಂದ್  ಲವ್  ಲೆಟರ್  ಬರ್ದಿದ್ದೆ  ,ಆದ್ರೆ  ಯಾವದನ್ನು  ಅವಳಿಗೆ  ಕೊಡೋ   ಧೈರ್ಯ  ಆಗಿರಲಿಲ್ಲ..........ಕ್ಲಾಸ್ನಲ್ಲಿ  ಲಾಸ್ಟ್  ಬೆನ್ಚಿಂದ  ಅವಳನ್ನೇ  ನೋಡ್ತಾ ಕುರ್ತಿದ್ದು.....ಎಲ್ಲಾ ನೆನಪಾಗ್ತಿದೆ  ,ಅವಳು  ನಮ್ಮ  ಕ್ಲಾಸಿನ  ಬ್ಯೂಟಿ ಕ್ಯೂನ್....... .
ಅವಳಿಗೋಸ್ಕರ  2-3 ಜನ  ಹುಡುಗರು ,ನನ್ನ ಕ್ಲಾಸ್ ಮೇಟ್ಸ್ ಗಳ   ಜೊತೆ  ಜಗಳ  ಆಡಿದ್ದು.... .

ನನಗೆ  ತಡೆಯೋಕ್ಕೆ   ಹಾಗ್ತಿಲ್ಲ ,ಅವಳನ್ನ  ಇನ್ನೊಮ್ಮೆ  ನೋಡ್ತಾ  ಇದ್ದೆ , ಬಿಂದು ಸ್ಕೂಲ್  ದಿನಗಳಿಗಿಂತ  ಇವಾಗ  ಇನ್ನೂ  ಚೆನ್ನಾಗಿ  ಕಾಣ್ತಿದ್ದಾಳೆ...

ಅವಳು  ಕೂಡ  ನನ್ನ  ಕಡೆ  ನೋಡಿ  ನಕ್ಕಳು ,ನಂತರ  ಬೇರೆ  air-hostess ಗಳಿಗೆ  ಏನೋ  ಹೇಳಿದಳು .ಅವರು  ಕೂಡ  ನನ್ನ  ಕಡೆ  ತಿರುಗಿ  ಕಿರು  ನಗೆ  ಬೀರಿದರು..
ಆಮೇಲೆ  ಏನಾಯಿತು  ಅಂತ  ಗೊತ್ತೇ  ಆಗ್ಲಿಲ್ಲ ,ಅವಳ  ಕೊಲಿಗೂ   ಕೂಡ  ಸಕತ್  ಆಗಿದ್ದಾಳೆ..

ಒಹ್  ಮೈ  ಗಾಡ್ !!!!!!!!!!!!!!!ಇವತ್ತು  ನನ್ನ  ಒಂದು  ಕನಸನ್ನು  ನನಸು  ಮಾಡ್ಬಿಟ್ಟೆ .
ಅವಳ  ಹತ್ತಿರ  ಹೋಗಿ  ಮಾತಾಡೋಣ  ಅಂದುಕೊಂಡೆ ,ಆದ್ರೆ  ಅದು  ಅವಳ  ಜಾಬ್  ಅಂತ  ಗೊತ್ತಿತ್ತು .....ಅವಳಿಗೆ ತೊಂದರೆ ಕೊಡಬಾರದು ಅಂತ ಸುಮ್ಮನಾದೆ...

ಮತ್ತೆ  ಹೊರಗಡೆ  ನೋಡಲು  ಶುರು  ಮಾಡಿದೆ ,ನಾವಾಗಲೇ  ಮೋಡಗಳ   ಮೇಲೆ  ಇದ್ವಿ .ಹೊರಗಡೆ  ಮುಸ್ಸಂಜೆ  ತುಂಬ  ಚೆನ್ನಗಿಕಾಣ್ತಿತ್ತು  ,ಹೊಳಗಡೆ  ಕೂಡ ,ಅವಳ  ನಗುವಿಂದಾಗಿ ............. .
ಹೇಗೋ  ಧೈರ್ಯ  ಮಾಡಿಕೊಂಡು  ಅವಳ  ಹತ್ತಿರ   ಮಾತಾಡಿಸೋಣ  ಅಂತ  ಹೋದೆ ,ಅವಳಿಗೂ  ನನಗೇನ್  ಬೇಕು  ಅಂತ  ತಿಳಿದಿರಬೇಕು .
ನನ್ನ  ಹತ್ತಿರ  ಬಂದು "ಸಾರೀ  ಕಣೋ ,ನಿನ್ನ  ಜೊತೆ  ತುಂಬ  ಮಾತಾಡಕ್ಕೆ  ಆಗ್ಲಿಲ್ಲ ......,
so ಹೇಗಿದ್ದೀಯ ,ಇಷ್ಟು  ವರ್ಷ  ಎಲ್ಲಿದ್ದೆ  ????,ಏನು  ನಿನ್ನ  ಜೀವನದ  ಕಥೆ ,ಏನಕ್ಕೆ  ಹೋಗ್ತಿದ್ಯ ?"

"hmmm...ನಾನ್  ಅಲ್ಲೇ  ಇದ್ದೆ ,ನೀನೆ  ಸ್ಕೂಲ್   ಮುಗಿದ  ಮೇಲೆ  ಎಲ್ಲಾ  ಬಿಟ್ಟು  ಹೋಗಿದ್ದು ,ನಿನ್ನನ್ನ  ಎಲ್ಲೆಲ್ಲೋ  ಹುಡುಕಿದೆ ,ಆದ್ರೆ  ನೀನ್  ಮಾತ್ರ  ಸಿಗಲಿಲ್ಲ ,ಆಮೇಲೆ  ಕಾಲೇಜ್  ಮುಗಿತು ,
ಒಳ್ಳೆ  ಕಂಪನಿಯಲ್ಲಿ  ಕೆಲಸ  ಸಿಗ್ತು  ,ನಂಗೊತ್ತಿಲ್ಲ ,ನಂಗೆ  ನಮ್ಮ  ಕಂಪನಿ  ಇಷ್ಟೆಲ್ಲಾ  ಕೊಟ್ಟಿದೆ ,ಇವಾಗ  ಆನ್ ಸೈಟ್  ಹೋಗ್ತಾ  ಇದೀನಿ ,ಯಾವಾಗ  ವಾಪಸ್  ಬರ್ತೀನಿ  ಅಂತ  ಗೊತ್ತಿಲ್ಲ ,ಬಿಂದು  ನಿಂಗೊತ್ತಾ,  ನಂಗೆ  ನನ್ನ  ಜೀವನದಲ್ಲಿ  ಎಲ್ಲಾ  ಸಿಕ್ಕಿದೆ ,ಆದ್ರೆ  'ಒಬ್ಬರನ್ನ'  ಬಿಟ್ಟು ,ನನ್ನ  ಸೋಲು ,ಗೆಲುವು ,ನನ್ನ  ಪ್ರಪಂಚ ,ಎಲ್ಲದನ್ನು  ಹಂಚಿಕೊಳ್ಳುವಂತವರು,"

ನೇರವಾಗಿ  ಅವಳ  ಕಣ್ಣನ್ನೇ  ನೋಡಿದೆ ,ಆ  ನೀಲಿ  ಕಂಗಳು ,ನನಗೆ  ಅನ್ನಿಸಿತು  ಅವಳಿಗೆ  'ಒಬ್ಬರನ್ನ' ಅಂದ್ರೆ  ಯಾರು  ಅಂತ  ಗೊತ್ತಾಗಿರಬಹುದು  ಅಂತ .......ಅವಳ  ಕಣ್ಣಲ್ಲಿ  ಸ್ವಲ್ಪ  ನೋವಿತ್ತು  ಅನ್ಸುತ್ತೆ ..........
 "ಸಾರೀ  ಕಣೋ ,ನಾನು  ಹೋಗಬೇಕು ,ನಿಂಗೆ  ನನ್ನ  ಫೋನ್  ನಂಬರ್   ಕೊಡ್ತಿನಿ ,ಆಮೇಲೆ  ಮಾತಾಡೋಣ "ಅಂತ ಹೇಳಿ ಹೋದಳು ...
ವಾಪಸ್  ನನ್ನ  ಸೀಟ್ ನಲ್ಲಿ  ಕುಳಿತೆ ,ನಿಶ್ಯಬ್ಧ .................,ಹೊರಗಡೆ  ನೋಡ್ತಾ  ಇದೀನಿ ,ಅವಳ  ಉತ್ತರಕ್ಕೆ  ಕಾಯ್ತಾ   ಇದೀನಿ ............
ಅಷ್ಟೊತ್ತಿಗಾಲೆ  ಹೊರಗಡೆ  ಕತ್ತಲು  ,ಇದ್ದಕಿದ್ದ  ಹಾಗೆ  ಗುಡುಗು ,ಮಿಂಚು....... ,ನನ್ನ  ಹೃದಯದಲ್ಲಿ  ಆದ  ಹಾಗೆ .........
ಇದ್ದಕಿದ್ದ  ಹಾಗೆ  ಪ್ಲೇನ್  ಕೂಡ  ಅಲುಗಾಡಲು  ಶುರು  ಆಯಿತು...... .ಎಲ್ಲರೂ  ಬೆಚ್ಚಿ  ಬಿದ್ದರು .

ಬಿಂದು  ಮೈಕ್ ಕಡೆ  ಹೋಗುವುದನ್ನು   ನೋಡಿದೆ ,ಯಾರು  ಹೆದರ  ಬಾರದು  ,ಹೊರಗಡೆ  ಗುಡುಗು  ಮಿಂಚಿ  ಇದೆ  ಅಷ್ಟೇ,ಇಲ್ಲೇ ಹತ್ತಿರ ಇರೋ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಮಾಡ್ತಿವಿ   ಅಂತ  ಮೈಕ್ ನಲ್ಲಿ    ಹೇಳಿದಳು...
ಆದ್ರೆ  ಪ್ಲೇನ್  ಇನ್ನೂ  ಜೋರಾಗಿ  ಅಲುಗಾಡಲು  ಶುರು  ಆಯಿತು  ,ಎಲ್ಲರೂ  ಇದೆ  ತಮ್ಮ  ಜೀವನದ  ಕೊನೆ  ಕ್ಷಣ  ಅಂತ  ಹೆದರಿ  ಬಿಟ್ಟಿದ್ರು .

ನಾನ್  ಮಾತ್ರ  ಬಿಂದುನನ್ನೇ ನೋಡ್ತಿದ್ದೆ ,ಅವಳು  ನನ್ನನ್ನೇ   ನೋಡ್ತಾ  ಇದ್ದಾಳೆ .
ನನ್ನ  ಬೆನ್ನಿಗೆ  ಏನೋ  ತಾಗಿದಂತಾಯಿತು  ,ನನ್ನ  ಮುಂದೆ  ಪೂರ್ತಿ  ಕತ್ತಲು  .ಪೂರ್ತಿ  ನಿಶ್ಯಬ್ಧ ,
ಇನ್ನೂ  ಆ  ಪ್ಲೇನ್  ಅಲುಗಾಡುತ್ತಿದೆ ,ಜನರ  ಹೆದರಿಕೆ ,
ಯಾರೋ  ಕೂಗಿದರು "ಗಿರೀssssssssssssಶ್ !!!!"
"ಗಿರೀಶ್ ,ಎದ್ದೇಳು .ಇವತ್ತು  ಕೂಡ  ಆಫೀಸಿನಲ್ಲಿ  ಮಲಿಗಿದ್ಯ ,..........ನಂಗೆ  ಆ  ರಿಪೋರ್ಟ್  ಬೇಗ  ಬೇಕು "

ಸುತ್ತ ನೋಡಿದೆ ,ಪ್ಲೇನು ಇಲ್ಲ,ಬಿಂದುನೂ  ಇಲ್ಲ,ಆನ್ ಸೈಟು ಇಲ್ಲ
ನನ್ನ  ಮ್ಯಾನೇಜರನ  ದುರುಗುಟ್ಟಿಕೊಂಡು   ನೋಡುತ್ತಾ   ನಿಂತೇ ..ನಿನ್ನಿಂದನೆ   ಆ  ಪ್ಲೇನ್ ಕ್ರಾಶ್  ಆಗಿದ್ದು ಅಂತ ಅವನಿಗೆ ಬೈಯುತ್ತಾ... ..

ಇನ್ನೂ  ಗೊತ್ತಿಲ್ಲ ,ಪ್ರತಿ  ದಿನ ಮಧ್ಯಾನ   2-3 ಗಂಟೆಗೆ  ಯಾಕ್ ಇಗಾಗುತ್ತೆ  ಅಂತ ....